ಭದ್ರಾವತಿ: ತಾಲೂಕಿನ ತಾಷ್ಕೆಂಟ್ ನಗರದ ಶ್ರೀ ಕೆರೆ ಏರಿ ಚೌಡೇಶ್ವರಿ ದೇವಸ್ಥಾನದ ಬೀಗ ಮುರಿದು ದೇವರ ಚಿನ್ನಾಭರಣ ಹಾಗು ಹುಂಡಿ ಹಣ ಕಳ್ಳತನ ಮಾಡಿರುವ ಘಟನೆ ನಡೆದಿದೆ.
ದೇವಸ್ಥಾನದ ಅರ್ಚಕರು ಮೇ.೨೭ರ ಸಂಜೆ ೬.೩೦ರ ಸಮಯದಲ್ಲಿ ಬೀಗ ಹಾಕಿಕೊಂಡು ಮನೆಗೆ ಹೋಗಿದ್ದು, ಮಾರನೇ ದಿನ ಬಂದು ನೋಡಿದಾಗ ದೇವಸ್ಥಾನದ ಬಾಗಿಲಿನ ಬೀಗ ಮುರಿದಿರುವುದು ಕಂಡು ಬಂದಿದೆ. ಪರಿಶೀಲನೆ ನಡೆಸಿದಾಗ ಹುಂಡಿಯಲ್ಲಿದ್ದ ಅಂದಾಜು ಸುಮಾರು ೪೦ ಸಾವಿರ ರು. ಕಾಣಿಕೆ ಹಣ ಹಾಗು ೭೫ ಗ್ರಾಂ ತೂಕದ ಬೆಳ್ಳಿಯ ಮತ್ತು ೧೦ ಗ್ರಾಂ ತೂಕದ ಬಂಗಾರದ ಆಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುವುದು ತಿಳಿದು ಬಂದಿದೆ.
ಈ ಸಂಬಂಧ ದೇವಸ್ಥಾನ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಪಿ ಲಿಂಗೇಶ್ ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ