ಶನಿವಾರ, ಜೂನ್ 1, 2024

ಕಿಡಿಗೇಡಿಗಳಿಂದ ಆಶಾಂತಿ ವಾತಾವರಣ : ಪೊಲೀಸರಿಗೆ ಮನವಿ

ಭದ್ರಾವತಿ ಹಳೇನಗರ ಭಾಗದಲ್ಲಿ ಕೆಲವು ಕಿಡಿಗೇಡಿಗಳಿಂದ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಶಾಂತಿ ಕಾಪಾಡುವಂತೆ ಆಗ್ರಹಿಸಿ ಸಾರ್ವಜನಿಕರು ಹಳೇನಗರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.
    ಭದ್ರಾವತಿ: ಹಳೇನಗರ ಭಾಗದಲ್ಲಿ ಕೆಲವು ಕಿಡಿಗೇಡಿಗಳಿಂದ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಶಾಂತಿ ಕಾಪಾಡುವಂತೆ ಆಗ್ರಹಿಸಿ ಸಾರ್ವಜನಿಕರು ಹಳೇನಗರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ. 
     ಕಳೆದ ೫ ದಿನಗಳ ಹಿಂದೆ ಮಧ್ಯಾಹ್ನ ಸುಮಾರು ೨ ಗಂಟೆ ಸಮಯದಲ್ಲಿ ಹನುಮಂತನಗರ, ಕಂಚಿಬಾಗಿಲು ವೃತ್ತದ ಶ್ರೀ ಚೌಡಮ್ಮ ದೇವಸ್ಥಾನದ ಹತ್ತಿರ ಮನು ಎಂಬುರನ್ನು ಕಿಡಿಗೇಡಿಗಳು ಅಡ್ಡಗಟ್ಟಿ ಮಾರಣಾತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ. ಈ ಹಿನ್ನಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು, ಆಶಾಂತಿ ವಾತಾವರಣ ನಿರ್ಮಾಣವಾಗಿದೆ. 
     ಈ ರೀತಿಯ ಘಟನೆಗಳು ಪುನಃ ಮರುಗಳಿಹಿಸದಂತೆ ತಕ್ಷಣ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಶಾಂತಿ ಕಾಪಾಡಬೇಕೆಂದು ಆಗ್ರಹಿಸಲಾಗಿದೆ. ಕೇಶವಮೂರ್ತಿ, ಮೈಲಾರಪ್ಪ, ಡಿ. ರಾಜು, ಲೋಕೇಶ್, ಮೇಘರಾಜ್ ಸೇರಿದಂತೆ ಇನ್ನಿತರ ಸ್ಥಳೀಯರು ಉಪಸ್ಥಿತರಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

  ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸ...