ಭದ್ರಾವತಿ ಹಳೇನಗರ ಭಾಗದಲ್ಲಿ ಕೆಲವು ಕಿಡಿಗೇಡಿಗಳಿಂದ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಶಾಂತಿ ಕಾಪಾಡುವಂತೆ ಆಗ್ರಹಿಸಿ ಸಾರ್ವಜನಿಕರು ಹಳೇನಗರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.
ಭದ್ರಾವತಿ: ಹಳೇನಗರ ಭಾಗದಲ್ಲಿ ಕೆಲವು ಕಿಡಿಗೇಡಿಗಳಿಂದ ಆಶಾಂತಿ ವಾತಾವರಣ ನಿರ್ಮಾಣವಾಗುತ್ತಿದ್ದು, ಶಾಂತಿ ಕಾಪಾಡುವಂತೆ ಆಗ್ರಹಿಸಿ ಸಾರ್ವಜನಿಕರು ಹಳೇನಗರ ಪೊಲೀಸ್ ಠಾಣೆಗೆ ಮನವಿ ಮಾಡಿದ್ದಾರೆ.
ಕಳೆದ ೫ ದಿನಗಳ ಹಿಂದೆ ಮಧ್ಯಾಹ್ನ ಸುಮಾರು ೨ ಗಂಟೆ ಸಮಯದಲ್ಲಿ ಹನುಮಂತನಗರ, ಕಂಚಿಬಾಗಿಲು ವೃತ್ತದ ಶ್ರೀ ಚೌಡಮ್ಮ ದೇವಸ್ಥಾನದ ಹತ್ತಿರ ಮನು ಎಂಬುರನ್ನು ಕಿಡಿಗೇಡಿಗಳು ಅಡ್ಡಗಟ್ಟಿ ಮಾರಣಾತಿಕ ಹಲ್ಲೆ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಜೀವ ಬೆದರಿಕೆ ಹಾಕಿರುತ್ತಾರೆ. ಈ ಹಿನ್ನಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಉಂಟಾಗಿದ್ದು, ಆಶಾಂತಿ ವಾತಾವರಣ ನಿರ್ಮಾಣವಾಗಿದೆ.
ಈ ರೀತಿಯ ಘಟನೆಗಳು ಪುನಃ ಮರುಗಳಿಹಿಸದಂತೆ ತಕ್ಷಣ ಕಿಡಿಗೇಡಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವ ಮೂಲಕ ಶಾಂತಿ ಕಾಪಾಡಬೇಕೆಂದು ಆಗ್ರಹಿಸಲಾಗಿದೆ. ಕೇಶವಮೂರ್ತಿ, ಮೈಲಾರಪ್ಪ, ಡಿ. ರಾಜು, ಲೋಕೇಶ್, ಮೇಘರಾಜ್ ಸೇರಿದಂತೆ ಇನ್ನಿತರ ಸ್ಥಳೀಯರು ಉಪಸ್ಥಿತರಿದ್ದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ