ಭದ್ರಾವತಿ ಅಪ್ಪರ್ ಹುತ್ತಾ ಅನನ್ಯ ಶಾಲೆ ಆವರಣದಲ್ಲಿ ಅನನ್ಯ ಎಜುಕೇಶನ್ ಟ್ರಸ್ಟ್ವತಿಯಿಂದ ವಿಐಎಸ್ಎಲ್ ಕಾರ್ಖಾನೆ ಸಹಯೋಗದೊಂದಿಗೆ ಶುಕ್ರವಾರ ವಿಶ್ವ ಯೋಗ ದಿನಾಚರಣೆ ಯಶಸ್ವಿಯಾಗಿ ಜರುಗಿತು.
ಭದ್ರಾವತಿ: ನಗರದ ಅಪ್ಪರ್ ಹುತ್ತಾ ಅನನ್ಯ ಶಾಲೆ ಆವರಣದಲ್ಲಿ ಅನನ್ಯ ಎಜುಕೇಶನ್ ಟ್ರಸ್ಟ್ವತಿಯಿಂದ ವಿಐಎಸ್ಎಲ್ ಕಾರ್ಖಾನೆ ಸಹಯೋಗದೊಂದಿಗೆ ಶುಕ್ರವಾರ ವಿಶ್ವ ಯೋಗ ದಿನಾಚರಣೆ ಯಶಸ್ವಿಯಾಗಿ ಜರುಗಿತು.
ದೈಹಿಕ ಶಿಕ್ಷಕ ಕುಮಾರ್ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯೋಗ ಕೇಂದ್ರದ ಯೋಗ ಪಟುಗಳು ಯೋಗಾಸನ ಪ್ರದರ್ಶಿಸಿದರು. ಟ್ರಸ್ಟ್ ಕಾರ್ಯದರ್ಶಿ ಬಿ.ಎಸ್ ಅನಿಲ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು.
ವಿಐಎಸ್ಎಲ್ ಕಾರ್ಖಾನೆ ಕಾರ್ಯಪಾಲಕ ನಿರ್ದೇಶಕ ಬಿ.ಎಲ್ ಚಾಂದ್ವಾನಿ, ವಿವಿಧ ಇಲಾಖೆಗಳ ಅಧಿಕಾರಿಗಳಾದ ಕೆ.ಎಸ್. ಸುರೇಶ್, ಎಲ್. ಪ್ರವೀಣ್ ಕುಮಾರ್ ಮತ್ತು ಶೋಭಾ ಶಿವಶಂಕರನ್, ಶಾಲೆಯ ಆಡಳಿತಾಧಿಕಾರಿ ವೇಣುಗೋಪಾಲ್, ಅನನ್ಯ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಕೆ. ಕಲ್ಲೇಶ್ ಕುಮಾರ್ ಹಾಗೂ ಅನನ್ಯ ಹ್ಯಾಪಿ ಹಾರ್ಟ್ಸ್ ಮುಖ್ಯ ಶಿಕ್ಷಕಿ ತನುಜಾ ಅನಿಲ್ ಮತ್ತು ಶಿಕ್ಷಕ ಹಾಗು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಶಾರದಾ ಶ್ರೀನಿವಾಸ್ರವರ ಯೋಗ ಗೀತೆಯೊಂದಿಗೆ ಕಾರ್ಯಕ್ರಮ ಆರಂಭಗೊಂಡಿತು. ಜಿ.ಎಸ್ ಶುಭ ಕೋಠಿ ಸ್ವಾಗತಿಸಿ, ಬಿ.ಎಚ್ ಕವನ ನಿರೂಪಿಸಿದರು. ಕೆ.ಯು ಕೀರ್ತಿ ವಂದಿಸಿದರು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ