ಶನಿವಾರ, ಜೂನ್ 1, 2024

ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಭ್ರಷ್ಟಾಚಾರ

ಯುವ ಮೋರ್ಚಾ ವತಿಯಿಂದ ಪ್ರತಿಭಟನೆ : ಉನ್ನತಮಟ್ಟದ ತನಿಖೆಗೆ ಆಗ್ರಹ  


ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಶನಿವಾರ ಭದ್ರಾವತಿ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರ ಖಂಡಿಸಿ ಶನಿವಾರ ನಗರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.  
    ನಗರದ ಮಾಧವಚಾರ್ ವೃತ್ತದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಹಾಕಿದ ಯುವ ಮೋರ್ಚಾ ಮುಖಂಡರು ಮಾತನಾಡಿ,ನಿಗಮದಲ್ಲಿ ನಡೆದಿರುವ ಕೋಟ್ಯಾಂತರ ರು. ಹಣ ದುರುಪಯೋಗ ಪ್ರಕರಣ ರಾಜ್ಯದ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿಯಾಗಿದೆ. ಹಣ ದುರುಪಯೋಗದ ಜಾಲಕ್ಕೆ ನಲುಗಿ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡಿರುವುದು ವಿಷಾದನೀಯ ಸಂಗತಿಯಾಗಿದ್ದು, ಈ ಪ್ರಕರಣವನ್ನು ಯುವ ಮೋರ್ಚಾ ಖಂಡಿಸುವ ಜೊತೆಗೆ ಉನ್ನತ ಮಟ್ಟದ ಸಿಬಿಐ ತನಿಖೆಗೆ ವಹಿಸಲು ಆಗ್ರಹಿಸುತ್ತದೆ ಎಂದರು.  
    ಯುವ ಮೋರ್ಚಾ ಅಧ್ಯಕ್ಷ ಧನುಷ್ ಬೋಸ್ಲೆ ಪ್ರತಿಭಟನೆ ನೇತೃತ್ವ ವಹಿಸಿದ್ದರು. ಉಪಾಧ್ಯಕ್ಷ ಧನ್ಯ ಪಟೇಲ್, ಪ್ರಮುಖರಾದ ಸುಧಾಕರ್, ಭರತ್, ತ್ಯಾಗರಾಜ್, ಮನು, ಶಶಾಂಕ್, ನವೀನ್, ರೈತ ಮೋರ್ಚಾ ಅಧ್ಯಕ್ಷ ಆನಂದ್, ಓಬಿಸಿ ಮೋರ್ಚಾ ಅಧ್ಯಕ್ಷ ರಾಜಶೇಖರ್ ಉಪ್ಪಾರ, ಸುಬ್ರಮಣಿ, ಶಾಂತಣ್ಣ,  ಎಸ್ಸಿ ಮೋರ್ಚಾದ ಪ್ರಧಾನ ಕಾರ್ಯದರ್ಶಿ ರಾಜೇಶ್ ಸೇರಿದಂತೆ ಯುವ ಮೋರ್ಚಾದ ಕಾರ್ಯಕರ್ತರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ವಿಐಎಸ್‌ಎಲ್ ಕಾರ್ಖಾನೆಯಲ್ಲಿ ವಿಶ್ವ ಪರಿಸರ ದಿನಾಚರಣೆ : ಸಾರ್ವಜನಿಕರಿಗೆ ಉಚಿತ ಸಸಿ ವಿತರಣೆ

  ಕೇಂದ್ರ ಉಕ್ಕು ಪ್ರಾಧಿಕಾರದ ಭದ್ರಾವತಿ ನಗರದ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಾರ್ವಜನಿಕರಿಗೆ ಉಚಿತ ಸಸ...